

ಭಾರತೀಯ ಸೇನೆಯಲ್ಲಿ ವಿಶೇಷ ಕಾರ್ಯಪಡೆಯಾಗಿರುವ ಬ್ಲಾಕ್ ಕ್ಯಾಟ್ ಕಮಾಂಡೊ ಪಡೆಗೆ ಕಾರ್ಕಳದ ಹೆಬ್ರಿ ತಾಲೂಕಿನ ದಿ. ಜಗದೀಶ್ ಶೆಟ್ಟಿ ಮತ್ತು ಶ್ರೀಮತಿ ಸತ್ಯವತಿ ಶೆಟ್ಟಿ ದಂಪತಿಗಳ ಸುಪುತ್ರ “ಸಚಿನ್ ಶೆಟ್ಟಿ” ಅವರು ಆಯ್ಕೆಯಾಗಿರುತ್ತಾರೆ. ಈ ಹಿನ್ನೆಲೆಯಲ್ಲಿ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರ ನೇತೃತ್ವದಲ್ಲಿ ಯೋಧ ಸಚಿನ್ ಶೆಟ್ಟಿಯವರ ಮನೆಗೆ ಭೇಟಿ ನೀಡಿ ದೇಶ ರಕ್ಷಣೆಯ ಸೇವೆಯಲ್ಲಿರುವ ವೀರಪುತ್ರನ ಮಾತೃಶ್ರೀಯವರಾದ ಸತ್ಯವತಿ ಶೆಟ್ಟಿಯವರಿಗೆ ಶಾಲು ಹೊದಿಸಿ ಗೌರವಿಸಲಾಯಿತು.






